23/03/2026
https://youtu.be/EdhGJ0_n1bc?si=toc27z2ybAJ0WZp-
ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ಜನ್ಮದಿನ;
ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶಿವರೆಡ್ಡಿ ಲಕ್ಷ್ಮಣ ಹುಚರೆಡ್ಡಿ ಅವರ ನೇತೃತ್ವದಲ್ಲಿ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಣೆ.
ಆತ್ಮೀಯರೆ,
ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಜನ್ಮದಿನದ ಪ್ರಯುಕ್ತ,
ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶಿವರೆಡ್ಡಿ ಲಕ್ಷ್ಮಣ ಹುಚರೆಡ್ಡಿ ಅವರ ನೇತೃತ್ವದಲ್ಲಿ, ಬೆಳಗಾವಿಯ ಶ್ರೀಮತಿ ಚೆನ್ನಮ್ಮ ಬಾ ಹಿರೇಮಠ ಎಂಬ ವೃದ್ದಾಶ್ರಮದಲ್ಲಿ ವೃದ್ದರೊಂದಿಗೆ ಕೇಕ್ ಕತ್ತರಿಸಿ, ಸಿಹಿ, ಹಣ್ಣು ಹಂಪಲು ವಿತರಣೆ ಜೊತೆಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸಿದ್ದಲಿಂಗಪ್ಪ ಸುನಕುಪ್ಪಿ, ಮಾರುತಿ ಮನಿಕೇರಿ, ದುಂಡಪ್ಪ ಸೌದತ್ತಿ, ಮಹಿಳಾ ಗೌರವಾಧ್ಯಕ್ಷರಾದ ರೂಪ ಅಂಗಡಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ಭಾಗ್ಯಶ್ರೀ ಪಾಟೀಲ್, ಜಿಲ್ಲಾ ಉಪಾಧ್ಯಕ್ಷರಾದ ಮೀನಾಕ್ಷಿ ಗಿಡ ಮಹಾದೇವಿ, ಹೋಟೆಲ್ ಅಶ್ವಿನಿ, ರಾಧಿಕಾ ಸೇರಿದಂತೆ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.