Jaya Karnataka Janapara Vedike

Jaya Karnataka Janapara Vedike JKJV Jaya Karnataka Janapara Vedike (JKJV) is a nonprofit organization that aims at improving the quality of life for the people of Karnataka.

A truly democratic, non-political organization that has originated in response to the ever increasing problems of the people of this state. The list of woes is endless, such as, disparities in our society, the widening gap between the rich and the poor, corruption and inefficiency in our political system, an administrative system that has ignored the cries of the common man, the farmers, the stude

nts, homeless labourers, deprivation of women's rights, commercialisation of education and medical sector, food adulteration, the list is endless. The solution is when every single person in the government machinery is held accountable. JKJV aims to be a transparent bridge between the government and the common man. We also strongly believe in the principle, "Of the People, By the People, For the People" and aim at empowering the common man to fight for his rights, to say NO to corruption, NO to exploitation, to demand and get what rightfully belongs to him. Jaya Karnataka Janapara Vedike
Head Office Address:
# 912, 9th floor, Barton Center, M.G.Road, Bengaluru - 560 001. Contact: +91 9900044299
Email: jayakarnatakajanaparavedike@gmail.com, jayakarnatakajv@gmail.com

ಧಾರವಾಡ ಜಿಲ್ಲೆಯಲ್ಲಿ ವಿಶ್ವಗುರು ಬಸವಣ್ಣನವರ ಅವರ 893ನೇ ಜಯಂತಿ ಆಚರಣೆಆತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರ...
20/04/2026

ಧಾರವಾಡ ಜಿಲ್ಲೆಯಲ್ಲಿ ವಿಶ್ವಗುರು ಬಸವಣ್ಣನವರ ಅವರ 893ನೇ ಜಯಂತಿ ಆಚರಣೆ

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಬಿ.ಗುಣರಂಜನ್ ಶೆಟ್ಡಿ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಅಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್ ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್. ರಾಮಚಂದ್ರಯ್ಯ ಅವರ ಸಲಹೆಯೊಂದಿಗೆ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ಅವರ ನೇತೃತ್ವದಲ್ಲಿ,

ವಿಶ್ವಗುರು, ಕಾಯಕಯೋಗಿ, ಜಗಜ್ಯೋತಿ ಬಸವಣ್ಣನವರ 893ನೇ ಜಯಂತೋತ್ಸವ ಪ್ರಯುಕ್ತ ಧಾರವಾಡದ ಶ್ರೀನಗರ ವೃತ್ತದಲ್ಲಿರುವ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಬಸವ ಪೀಠದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಮಾಲರ್ಪಣೆ ಮಾಡುವ ಮೂಲಕ ಗೌರವ ನಮನಗಳು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಜಗದೀಶ ಜಾದವ, ರವೀಂದ್ರ ಮಾನೆ, ಮೋಹನ ಘಾಟಗೆ, ಮಂಜುನಾಥ ಅಂಗಡಿ, ವಿನೋದಗೌಡ ಪಾಟೀಲ, ಗುರುಸಿದ್ದಪ್ಪ ಅವ್ವನವರ, ರಾಜು ಕಾಳೆ, ನವೀನ ಹಾದಿಮನಿ, ಸಂಜಯ ಇಂಗಳೆ, ಮಂಜುನಾಥ ಮಾನೆ, ವಿನಯ ಕರಿಗಾರ ರಾಜು ಸವದತ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯ ಹಾಗೂ ಬಸವಣ್ಣನವರ ಜಯಂತಿಯ ಹಾರ್ದಿಕ ಶುಭಾಶಯಗಳು.ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ, ಮೇಲು-ಕೀಳು ...
20/04/2026

ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯ ಹಾಗೂ ಬಸವಣ್ಣನವರ ಜಯಂತಿಯ ಹಾರ್ದಿಕ ಶುಭಾಶಯಗಳು.

ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ, ಮೇಲು-ಕೀಳು ಎಂಬ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಅವಿರತವಾಗಿ ಶ್ರಮಿಸಿದ ಕಾಯಕ ಯೋಗಿ, ಬಸವಣ್ಣನವರ ಕಾರ್ಯ ಹಾಗೂ ಆದರ್ಶಗಳು ನಮಗೆ ಸದಾ ಸ್ಪೂರ್ತಿದಾಯಕವಾಗಿದೆ.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.


ಆತ್ಮೀಯರೆ,ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ...
18/04/2026

ಆತ್ಮೀಯರೆ,

ಪರಿಸರವಾದಿಗಳು, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರನ್ನು,

ಕಾರ್ಯಕ್ರಮದ ನಿಮಿತ್ತವಾಗಿ ಭೇಟಿಯಾದ ಆನೇಕಲ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ನವೀನ್.ಬಿ.ಎಸ್ ಮತ್ತು ತಂಡದವರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್, ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್. ರಾಮಚಂದ್ರಯ್ಯ, ಬೆಂಗಳೂರು ಜಿಲ್ಲಾ ಅಧ್ಯಕ್ಷರಾದ ಶ್ರೀ ಲೋಕೇಶ್.ಪಿ, ಬೆಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಸುನಂದಾ ರೆಡ್ಡಿ ಸೇರಿದಂತೆ ಆನೇಕಲ್ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಗದಗ ಜಿಲ್ಲಾ ಹಿರಿಯ ನಾಗರೀಕರಿಗೆ ಪಿಂಚಣಿ ಹಣವನ್ನು ಬಿಡುಗಡೆಗೊಳಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಯಕರ್ನಾಟಕ ಜನಪರ ವೇದಿಕೆ...
14/04/2026

ಗದಗ ಜಿಲ್ಲಾ ಹಿರಿಯ ನಾಗರೀಕರಿಗೆ ಪಿಂಚಣಿ ಹಣವನ್ನು ಬಿಡುಗಡೆಗೊಳಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಯಕರ್ನಾಟಕ ಜನಪರ ವೇದಿಕೆ ಗದಗ ಜಿಲ್ಲಾ ಸಮಿತಿ

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್.ರಾಮಚಂದ್ರಯ್ಯ ಅವರ ಸಲಹೆಯೊಂದಿಗೆ,

ರಾಜ್ಯ ಉಪಾಧ್ಯಕ್ಷರಾದ ಹಾಲಪ್ಪ ವರವಿ ಅವರು ಹಾಗೂ ಗದಗ ಜಿಲ್ಲೆಯ ಅಧ್ಯಕ್ಷರಾದ ಸಣ್ಣಯಲಪ್ಪ ರಾಮಣ್ಣ ವಳಗೇರಿ ಅವರ ನೇತೃತ್ವದಲ್ಲಿ,

ಗದಗ ಜಿಲ್ಲೆಯಲ್ಲಿ ಸುಮಾರು ಐದು ತಿಂಗಳಿನಿಂದ ಹಿರಿಯ ನಾಗರಿಕರಿಗೆ ಸರ್ಕಾರದಿಂದ ಪಿಂಚಣಿ ಹಣವು ಬಂದಿರುವುದಿಲ್ಲವೆಂದು ಸುಮಾರು ಹಿರಿಯ ನಾಗರಿಕರು ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಗದಗ ಜಿಲ್ಲಾ ಸಮಿತಿಯ ಗಮನಕ್ಕೆ ತಂದ ತಕ್ಷಣವೇ, ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಗದಗ ಜಿಲ್ಲಾ ತಂಡವು ಗದಗ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಪಿಂಚಣಿ ಹಣದ ಮೇಲೆ ಬಡ ಹಿರಿಯರ ಜೀವನ ಅವಲಂಬಿತವಾಗಿದೆ ಅಷ್ಟೇ ಅಲ್ಲದೆ ಅವರಿಗೆ ಔಷಧಿಗಳಿಗೆ ಊಟ ಉಪಚಾರಗಳಿಗೆ ತೊಂದರೆಯಾಗಿದೆ ಎಂದು ಸಂಪೂರ್ಣ ವಿಷಯ ತಿಳಿಸಿ ಆದಷ್ಟು ಬೇಗ ಹಿರಿಯ ನಾಗರಿಕರಿಗೆ ಪಿಂಚಣಿಯನ್ನು ಕೊಡಿಸಿ ಎಂದು ಮನವಿಯನ್ನು ಸಲ್ಲಿಸಲಾಯಿತು.

ನಮ್ಮ ಮನವಿ ಸ್ವೀಕರಿಸಿದ ಮಾನ್ಯ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವಾಗಿ ಪಿಂಚಣಿ ಹಣವನ್ನು ಬಿಡುಗಡೆಗೊಳಿಸಲು ಸೂಚನೆ ನೀಡುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಪದಾಧಿಕಾರಿಗಳಾದ ಅಂಬರೀಶ್ ಗಡ್ಡಿ, ಜಗದೀಶ್ ಕರಡಿಗುಡ್ಡ, ವೀರೇಶ್ ಹಿರೇಮಠ, ಮಾರುತಿ ಹೊಂಬಳ, ವೆಂಕಟೇಶ್ ಶಾಂತಗಿರಿ, ಸಂತೋಷ ವಡ್ಡರ, ಪ್ರಕಾಶ್ ಹಿರೇಮಠ ಸೇರಿದಂತೆ ಇನ್ನು ಇತರರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ರಾಯಚೂರು ಜಿಲ್ಲೆಯ ಜಯಕರ್ನಾಟಕ ಜನಪದ ವೇದಿಕೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ಜಯಂತಿ ಆಚರಣೆಆತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿಕ...
14/04/2026

ರಾಯಚೂರು ಜಿಲ್ಲೆಯ ಜಯಕರ್ನಾಟಕ ಜನಪದ ವೇದಿಕೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ಜಯಂತಿ ಆಚರಣೆ

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ರಾಯಚೂರು ಜಿಲ್ಲಾ ಅಧ್ಯಕ್ಷರಾದ ಶ್ರೀ ಜಂಬಣ್ಣ ಜಲ್ದಾರ್ ಅವರ ನೇತೃತ್ವದಲ್ಲಿ,

ರಾಯಚೂರು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸುವ ಮುಖಾಂತರ ಗೌರವ ಪೂರ್ವಕವಾಗಿ ನಮನಗಳನ್ನು ಸಲ್ಲಿಸಿದರು.

ಈ ಸಮಾರಂಭದಲ್ಲಿ ರಾಯಚೂರು ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಬಳ್ಳಾರಿ ಜಿಲ್ಲೆಯ ಜಯಕರ್ನಾಟಕ ಜನಪದ ವೇದಿಕೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ಜಯಂತಿ ಆಚರಣೆಆತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿಕ...
14/04/2026

ಬಳ್ಳಾರಿ ಜಿಲ್ಲೆಯ ಜಯಕರ್ನಾಟಕ ಜನಪದ ವೇದಿಕೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ಜಯಂತಿ ಆಚರಣೆ

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಂಕರ್ ಬಸಪ್ಪ ಅವರ ನೇತೃತ್ವದಲ್ಲಿ,

ಬಳ್ಳಾರಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸುವ ಮುಖಾಂತರ ಗೌರವ ಪೂರ್ವಕವಾಗಿ ನಮನಗಳನ್ನು ಸಲ್ಲಿಸಿದರು.

ಈ ಸಮಾರಂಭದಲ್ಲಿ ಬಳ್ಳಾರಿ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಕೊಪ್ಪಳ ಜಿಲ್ಲೆಯ ಜಯ ಕರ್ನಾಟಕ ಜನಪದ ವೇದಿಕೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ಜಯಂತಿ ಆಚರಣೆಆತ್ಮೀಯರೆ, ನಮ್ಮ ಜಯಕರ್ನಾಟಕ ಜನಪರ ವೇದಿ...
14/04/2026

ಕೊಪ್ಪಳ ಜಿಲ್ಲೆಯ ಜಯ ಕರ್ನಾಟಕ ಜನಪದ ವೇದಿಕೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ಜಯಂತಿ ಆಚರಣೆ

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಶ್ರೀ ಪ್ರಕಾಶ್ ರಾಮಣ್ಣ ದೇಸಾಯಿ ಅವರ ನೇತೃತ್ವದಲ್ಲಿ,

ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಪ್ರಯುಕ್ತ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸುವ ಮುಖಾಂತರ ಗೌರವ ಪೂರ್ವಕವಾಗಿ ನಮನಗಳನ್ನು ಸಲ್ಲಿಸಿದರು.

ಈ ಸಮಾರಂಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ಮಂಜುನಾಥ್ ಮ್ಯಾಗಲಮನೆ, ಪದಾಧಿಕಾರಿಗಳಾದ ಮುದಿಯಪ್, ಬುಧಗುಂಪ, ಜುಬೇರ್, ಅನಿಲ್ ಚ್ಲಾವದಿ ಇತರರು ಭಾಗವಹಿಸಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಶಿವಮೊಗ್ಗ ಜಿಲ್ಲೆಯ ಜಯ ಕರ್ನಾಟಕ ಜನಪದ ವೇದಿಕೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ಜಯಂತಿ ಆಚರಣೆಆತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದ...
14/04/2026

ಶಿವಮೊಗ್ಗ ಜಿಲ್ಲೆಯ ಜಯ ಕರ್ನಾಟಕ ಜನಪದ ವೇದಿಕೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ಜಯಂತಿ ಆಚರಣೆ

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಸುರೇಶ್ ಶೆಟ್ಟಿಯವರ ಅವರ ನೇತೃತ್ವದಲ್ಲಿ,

ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಪ್ರಯುಕ್ತ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸುವ ಮುಖಾಂತರ ಗೌರವ ಪೂರ್ವಕವಾಗಿ ನಮನಗಳನ್ನು ಸಲ್ಲಿಸಿ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಮಾರಂಭದಲ್ಲಿ ಪದಾಧಿಕಾರಿಗಳಾದ ನಾಗರಾಜ ಶೆಟ್ಟಿ, ಪರಶುರಾಮ್, ವಕೀಲರಾದ ನಾಗರಾಜ್ ಮತ್ತು ವಿಜಯ್ ಬಾವಾನಿ ಶಂಕರ್ ರಂಗನಾಥ್ ಇತರರು ಭಾಗವಹಿಸಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

#

ಬೆಳಗಾವಿ ಜಿಲ್ಲೆಯ ಜಯ ಕರ್ನಾಟಕ ಜನಪದ ವೇದಿಕೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ಜಯಂತಿ ಆಚರಣೆಆತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿ...
14/04/2026

ಬೆಳಗಾವಿ ಜಿಲ್ಲೆಯ ಜಯ ಕರ್ನಾಟಕ ಜನಪದ ವೇದಿಕೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ಜಯಂತಿ ಆಚರಣೆ

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಿವರೆಡ್ಡಿ ಹುಚರೆಡ್ಡಿ ಅವರ ನೇತೃತ್ವದಲ್ಲಿ,

ಸಂವಿಧಾನ ಶಿಲ್ಪಿ, ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಪ್ರಯುಕ್ತ ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮುಖಾಂತರ ಗೌರವ ಪೂರ್ವಕವಾಗಿ ನಮನಗಳನ್ನು ಸಲ್ಲಿಸಲಾಯಿತು.

ಈ ಸಮಾರಂಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸಿದಲಿಂಗಪ್ಪ ಕುಪ್ಪಿ, ಮಹಿಳಾ ಜಿಲ್ಲಾಧ್ಯಕ್ಷರು ಭಾಗ್ಯಶ್ರೀ ಪಾಟೀಲ್, ಗಜಾನನ್ ಪೇಷೆ, ಶಶಿಕಾಂತ್ ಗೌಡರ್, ಸುನಿಲ್ ಚೌಹಾನ್, ರವಿ ಗೌಡ, ಮೋಹನ್ ಪವಾರ್, ಹನುಮಂತ ದಳವಾಯಿ, ಮನೋಹರ್ ಪಮ್ಮಾರ್, ಪಾಂಡು, ಮಹಿಳಾ ಉಪಾಧ್ಯಕ್ಷರಾದ ಮೀನಾಕ್ಷಿ ಹತ್ತಿ ಗಿಡದ, ಗೌರವಾಧ್ಯಕ್ಷರಾದ ರೂಪ ಅಂಗಡಿ ರುದ್ರವ ಬಡಿಗೇರ್, ಮಹಾದೇವಿ ಹುಡೇ, ಅಶ್ವಿನಿ ಗುಡೆ, ರೇಣುಕಾ ಹೊಳೆ, ಯಶೋಧ ಮಾಲಿಂಗಪುರ್, ರಾಧಿಕಾ ಕನ್ನೆರಿ, ಮಂಜುಳಾ ಹರಿಜನ ಮತ್ತು ಅನೇಕ ಸದಸ್ಯರು ಪಾಲ್ಗೊಂಡಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಧಾರವಾಡ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಆತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರ...
14/04/2026

ಧಾರವಾಡ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಬಿ.ಗುಣರಂಜನ್ ಶೆಟ್ಡಿ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಅಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್ ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್. ರಾಮಚಂದ್ರಯ್ಯ ಅವರ ಸಲಹೆಯೊಂದಿಗೆ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ಅವರ ನೇತೃತ್ವದಲ್ಲಿ,

ವಿಶ್ವನಾಯಕ, ಸಂವಿಧಾನ ಶಿಲ್ಪಿ ಭಾರತ ರತ್ನ, ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಪ್ರಯುಕ್ತ ಧಾರವಾಡದ ವಿದ್ಯಾವರ್ಧಕ ಸಂಘದ ಹತ್ತಿರ ಇರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲರ್ಪಣೆ ಮಾಡುವ ಮೂಲಕ ಗೌರವ ನಮನಗಳು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಜಗದೀಶ ಜಾದವ, ರವೀಂದ್ರ ಮಾನೆ, ಮೋಹನ ಘಾಟಗೆ, ಮಂಜುನಾಥ ಅಂಗಡಿ, ವಿನೋದಗೌಡ ಪಾಟೀಲ, ಗುರುಸಿದ್ದಪ್ಪ ಅವ್ವನವರ, ರಾಜು ಕಾಳೆ, ನವೀನ ಹಾದಿಮನಿ, ಸಂಜಯ ಇಂಗಳೆ, ಮಂಜುನಾಥ ಮಾನೆ, ವಿನಯ ಕರಿಗಾರ ರಾಜು ಸವದತ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಜಯಕರ್ನಾಟಕ ಜನಪರ ವೇದಿಕೆಯ ಬಸವನಗುಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು.ಆತ್...
14/04/2026

ಜಯಕರ್ನಾಟಕ ಜನಪರ ವೇದಿಕೆಯ ಬಸವನಗುಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಬಿ.ಗುಣರಂಜನ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ರಾಜ್ಯಾಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್, ರಾಜ್ಯ ಕಾರ್ಯಧ್ಯಕ್ಷರಾದ ಶ್ರೀ ಹೆಚ್.ರಾಮಚಂದ್ರಯ್ಯ ಹಾಗೂ ಬೆಂಗಳೂರು ಜಿಲ್ಲಾ ಅಧ್ಯಕ್ಷರಾದ ಶ್ರೀ ಲೋಕೇಶ್ ಅವರ ಘನ ಉಪಸ್ಥಿತಿಯಲ್ಲಿ,

ಬೆಂಗಳೂರು ಜಿಲ್ಲಾ ಬವಸವಗುಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಸುನಿಲ್ ಅವರ ಅಧ್ಯಕ್ಷತೆಯಲ್ಲಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅಂಬೇಡ್ಕರ್ ಅವರ ಪುತ್ಥಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಬಿಬಿಎಂಪಿ ಪೌರಕಾರ್ಮಿಕರಿಗೆ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರಗಳನ್ನು ವಿತರಿಸಿ, ಅನ್ನ ಸಂತರ್ಪಣೆ ಮಾಡುವ ಮೂಲಕ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ರಾಜ್ಯ ಮಹಾ ಪ್ರಧಾನ ಸಂಚಾಲಕರಾದ ಶೆ.ಭೊ.ರಾಧಾಕೃಷ್ಣ, ರಾಜ್ಯ ಸಲಹೆಗಾರ ಕುಮಾರಸ್ವಾಮಿ, ರಾಜ್ಯ ಉಪಾಧ್ಯಕ್ಷರಾದ ಕೆ.ಎನ್. ಜಗದೀಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ, ಬೆಂಗಳೂರು ಜಿಲ್ಲಾ ಪ್ರಧಾನ ಸಂಚಾಲಕ ರಾಜೇಶ್, ಜಿಲ್ಲಾ ಉಪಾಧ್ಯಕ್ಷ ದೀಪಕ್ ರಸ್ಕೀನಾ, ಜಿಲ್ಲಾ ಪದಾಧಿಕಾರಿ ಕುಮಾರ್, ಶಾಂತಿನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶಿವಕುಮಾರ್, ಗಾಂಧಿನಗರ ಕ್ಷೇತ್ರದ ಅಧ್ಯಕ್ಷರಾದ ಪೂರ್ಣೇಶ್, ಮಲ್ಲೇಶ್ವರ ಕ್ಷೇತ್ರದ ಅಧ್ಯಕ್ಷರಾದ ಯೋಗೇಶ್, ಮಹಾಲಕ್ಷ್ಮೀಪುರ ಕ್ಷೇತ್ರದ ಅಧ್ಯಕ್ಷರಾದ ವೇಲು, ಸರ್ವಜ್ಞನಗರ ಕ್ಷೇತ್ರದ ಅಧ್ಯಕ್ಷರಾದ ಮಣಿ, ರಾಜಾಜಿನಗರ ಕ್ಷೇತ್ರದ ಅಧ್ಯಕ್ಷರಾದ ಕಾರ್ತಿಕ್ ಸೇರಿದಂತೆ ಬಸವನಗುಡಿ ಕ್ಷೇತ್ರದ ಪದಾಧಿಕಾರಿಗಳು, ಕಾರ್ಯಕರ್ತರು, ಪೌರ ಕಾರ್ಮಿಕರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಭಾರತದ ಸಂವಿಧಾನದ ಶಿಲ್ಪಿ, ಸಮಾನತೆ ಮತ್ತು ನ್ಯಾಯದ ಮಹಾನ್ ಹೋರಾಟಗಾರರಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಅವರಿಗೆ ನಮ್ಮ ಗೌರವಪೂ...
14/04/2026

ಭಾರತದ ಸಂವಿಧಾನದ ಶಿಲ್ಪಿ, ಸಮಾನತೆ ಮತ್ತು ನ್ಯಾಯದ ಮಹಾನ್ ಹೋರಾಟಗಾರರಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಅವರಿಗೆ ನಮ್ಮ ಗೌರವಪೂರ್ಣ ನಮನಗಳು.

ಅವರು ನೀಡಿದ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶಿಕ್ಷಣದ ಮೌಲ್ಯಗಳು ನಮ್ಮ ಸಮಾಜವನ್ನು ಬೆಳಗಿಸುವ ದೀಪವಾಗಿವೆ. ಅವರ ದೃಷ್ಟಿಕೋನದಿಂದ ಪ್ರೇರಿತರಾಗಿ, ನ್ಯಾಯಸಮ್ಮತ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ನಾವು ಎಲ್ಲರೂ ಬದ್ಧರಾಗೋಣ.

ಎಲ್ಲರಿಗೂ ಅಂಬೇಡ್ಕರ್ ಜಯಂತಿಯ ಹಾರ್ದಿಕ ಶುಭಾಶಯಗಳು.

#ಅಂಬೇಡ್ಕರ್ಜಯಂತಿ #ಡಾBRಅಂಬೇಡ್ಕರ್ #ಸಮಾನತೆ #ಸಾಮಾಜಿಕನ್ಯಾಯ #ಸಂವಿಧಾನ #ಪ್ರೇರಣೆ #ಗೌರವ #ಭಾರತ

Address

JAYA KARNATAKA JANAPARA VEDIKE (Regd. ) #912, 9th Floor, Barton Center, M. G. Road
Bangalore
560001

Opening Hours

Monday 9:30am - 6pm
Tuesday 9:30am - 6pm
Wednesday 9:30am - 6pm
Thursday 9:30am - 6pm
Friday 9:30am - 6pm
Saturday 9:30am - 6pm

Alerts

Be the first to know and let us send you an email when Jaya Karnataka Janapara Vedike posts news and promotions. Your email address will not be used for any other purpose, and you can unsubscribe at any time.

Contact The Practice

Send a message to Jaya Karnataka Janapara Vedike:

Share