20/04/2026
ಧಾರವಾಡ ಜಿಲ್ಲೆಯಲ್ಲಿ ವಿಶ್ವಗುರು ಬಸವಣ್ಣನವರ ಅವರ 893ನೇ ಜಯಂತಿ ಆಚರಣೆ
ಆತ್ಮೀಯರೆ,
ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಬಿ.ಗುಣರಂಜನ್ ಶೆಟ್ಡಿ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಅಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್ ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್. ರಾಮಚಂದ್ರಯ್ಯ ಅವರ ಸಲಹೆಯೊಂದಿಗೆ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ಅವರ ನೇತೃತ್ವದಲ್ಲಿ,
ವಿಶ್ವಗುರು, ಕಾಯಕಯೋಗಿ, ಜಗಜ್ಯೋತಿ ಬಸವಣ್ಣನವರ 893ನೇ ಜಯಂತೋತ್ಸವ ಪ್ರಯುಕ್ತ ಧಾರವಾಡದ ಶ್ರೀನಗರ ವೃತ್ತದಲ್ಲಿರುವ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಬಸವ ಪೀಠದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಮಾಲರ್ಪಣೆ ಮಾಡುವ ಮೂಲಕ ಗೌರವ ನಮನಗಳು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಜಗದೀಶ ಜಾದವ, ರವೀಂದ್ರ ಮಾನೆ, ಮೋಹನ ಘಾಟಗೆ, ಮಂಜುನಾಥ ಅಂಗಡಿ, ವಿನೋದಗೌಡ ಪಾಟೀಲ, ಗುರುಸಿದ್ದಪ್ಪ ಅವ್ವನವರ, ರಾಜು ಕಾಳೆ, ನವೀನ ಹಾದಿಮನಿ, ಸಂಜಯ ಇಂಗಳೆ, ಮಂಜುನಾಥ ಮಾನೆ, ವಿನಯ ಕರಿಗಾರ ರಾಜು ಸವದತ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.