26/02/2026
ಉಚಿತ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣಾ ಶಿಬಿರ
ದಿನಾಂಕ 25 ಫೆಬ್ರವರಿ 2026, ಬುಧವಾರ, ಶಿವಮೊಗ್ಗದ ಹೆಸರಾಂತ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸೊರಬ ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇವರ ಸಹಯೋಗದಲ್ಲಿ ಸೊರಬ ತಾಲೂಕಿನ ನಾಗರಿಕರಿಗಾಗಿ ಕ್ಯಾನ್ಸರ್ ಜಾಗೃತಿ ಹಾಗೂ ಉಚಿತ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಶಿಬಿರದಲ್ಲಿ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ನುರಿತ ಕ್ಯಾನ್ಸರ್ ವೈದ್ಯರಾದ ಡಾ. ಅಮಿತ್ ರಾಜ್ ಹಾಗೂ ವೈದ್ಯಕೀಯ ಸಿಬ್ಬಂದಿಗಳಿಂದ ಸುಮಾರು 100 ಕ್ಕೂ ಹೆಚ್ಚು ತಪಾಸಣೆಗಳು ನಡೆಸಲಾಯಿತು.
ವಿಶೇಷವಾಗಿ ಮಹಿಳೆಯರಿಗೆ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ತಪಾಸಣೆ, ಹಾಗೂ ಪುರುಷರಿಗೆ ಬಾಯಿ ಮತ್ತು ಶ್ವಾಸಕೋಶ ಕ್ಯಾನ್ಸರ್ ತಪಾಸಣೆಗಳನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.
ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳಿಗೆ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಮತ್ತು ರೆಡ್ಡೀಸ್ ಫಾರ್ಮಾ ವತಿಯಿಂದ ಉಚಿತವಾಗಿ ಔಷಧಿಗಳನ್ನು ವಿತರಿಸಲಾಯಿತು.